ಲಾಕ್ಡೌನ್ ಆದೇಶ ಉಲ್ಲಂಘಿಸಿದ್ರೆ ಕಾಲಿಗೆ ಗುಂಡು ಹೊಡೆಯಿರಿ ಎಂದು ಉತ್ತರ ಪ್ರದೇಶದ ಗಾಜಿಯಾಬಾದ್ನ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್ ಆದೇಶ ಕೊಟ್ಟಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.
ನಂದಕಿಶೋರ್ ಗುರ್ಜರ್ ಗುಂಡು ಹೊಡೆಯುವ ಪೊಲೀಸರಿಗೆ ಬಹುಮಾನ ನೀಡುವುದಾಗಿಯೂ ಘೋಷಿಸಿದ್ದು, ಆದೇಶ ಉಲ್ಲಂಘಿಸುವವರು ದೇಶದ್ರೋಹಿಗಳು ಎಂದು ಹೇಳಿದ್ದಾರೆ. ಅಂತಹವರ ಕಾಲಿಗೆ ಗುಂಡಿಕ್ಕಿದರೆ 5,100ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.